ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಳಿತ್ತನೂಜಿ ವಾರ್ಡಿನ ಕಲ್ಲಮರೆಯಿ ಪ್ರದೇಶದಲ್ಲಿ ತೀವ್ರ ಮಳೆಯಿಂದಾಗಿ ಪ್ರಮುಖ ಕಾಲುದಾರಿ ಸಂಪೂರ್ಣವಾಗಿ ಜರಿದು ಹೋಗಿದೆ.
ಈ ಮೂಲಕ ತಾಳಿತ್ತನೂಜಿ ನಿವಾಸಿಗಳು ಬಳಸುತ್ತಿದ್ದ ಏಕೈಕ ಸಂಪರ್ಕ ಮಾರ್ಗ ಮುಚ್ಚಲ್ಪಟ್ಟಿದ್ದು, ಸಾರ್ವಜನಿಕರು ದೈನಂದಿನ ಓಡಾಟಕ್ಕೆ ಪರದಾಡುವಂತ ಅವಸ್ಥೆ ಉಂಟಾಗಿದೆ.
ಮಳೆಯ ಬಿರುಸಿನಿಂದಾಗಿ ಕಾಲುದಾರಿ ಸಂಪೂರ್ಣವಾಗಿ ಜರಿದು ಹೋಗಿ ಇದರ ಪರಿಣಾಮವಾಗಿ ಶಾಲೆಗೆ ಹೋಗುವ ಮಕ್ಕಳು, ಕೆಲಸಕ್ಕೆ ಹೋಗುವ ಕಾರ್ಮಿಕರು, ಸಮಸ್ಯೆ ಎದುರಿಸುತ್ತಿದ್ದಾರೆ.
ಈ ಘಟನೆ ಸಂಬಂಧಿಕವಾಗಿ ಸ್ಥಳಕ್ಕೆ ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕೆ.ಎ. ಅಸ್ಮ ಹಸೈನಾರ್, ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಲಾವಣ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾತನಾಡಿ, ಶೀಘ್ರ ದುರಸ್ತಿ ಕಾಮಗಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.