ಬೆಂಗಳೂರು: ಆರ್ಎಸ್ಎಸ್ ಹಾಗೂ ಬಜರಂಗದಳದ ವಿರುದ್ಧ ಬಹಿರಂಗ ಟೀಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ನಗರದ 42ನೇ ಎಸ್ಜಿಎಂ (CJM) ನ್ಯಾಯಾಲಯ ನೋಟಿಸ್ ಜಾರಿ ಮಾಡಿಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಜೂನ್ 26 ರೊಳಗೆ ನೋಟಿಸ್ಗೆ ಉತ್ತರಿಸಬೇಕೆಂದು ಕೋರ್ಟ್ ನಿರ್ದೇಶನ ನೀಡಿದೆ.
ಈ ನೋಟಿಸ್, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 223 ಅಡಿಯಲ್ಲಿ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ದಿನಗಳ ಹಿಂದೆ ವಿಧಾನಸಭಾ ಸದನದಲ್ಲಿ, "ಅತಿಹೆಚ್ಚು ಅಪರಾಧ ಕೃತ್ಯಗಳು ಆರ್ಎಸ್ಎಸ್ ಮತ್ತು ಬಜರಂಗದಳದಿಂದ ಆಗುತ್ತಿವೆ ಎಂಬ ಹೇಳಿಕೆ ನೀಡಿದ್ದು,ಈ ಹೇಳಿಕೆಯಿಂದ ಸದನದಲ್ಲಿ ಗಲಾಟೆ ಉಂಟಾಗಿ ಬಿಜೆಪಿ ಶಾಸಕರು ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ವಾಗ್ದಾಳಿ ನಡೆಸಿದ್ದಾರೆ.
ಹೆಚ್ಚಾಗಿ ಈ ಹೇಳಿಕೆಯಿಂದ ಜನರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿ ಕಿರಣ್ ಎಂಬ ವ್ಯಕ್ತಿ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರನ್ನು ದಾಖಲಿಸಿದ್ದರು.
ಈ ಪ್ರಕರಣ ದಾಖಲಿಸುವ ಮೊದಲು ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಕೇಳಲು ಅವಕಾಶ ನೀಡಬೇಕು ಎಂದು ನ್ಯಾಯಾಲಯ ತಿಳಿಸಿದ್ದು, ಹೀಗಾಗಿ ನೋಟಿಸ್ ಜಾರಿ ಮಾಡಲಾಗಿದೆ