ಪುತ್ತೂರು : ಪುತ್ತೂರು ಬೈಪಾಸ್ ರಸ್ತೆಯ ಎಂಆರ್ಪಿಎಲ್ ಪೆಟ್ರೋಲ್ ಪಂಪ್ ಬಳಿ ಕಾರೊಂದು ರಾಂಗ್ ಸೈಡ್ ನಿಂದಾ ಬಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ತೇಂಕಿಳ ಮೂಲದ ಯುವಕನಿಗೆ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ.
ಆಕಾಶ್ ಎಂಬ ತೇಂಕಿಳ ನಿವಾಸಿ ಬೈಕ್ ಸವಾರನಾಗಿದ್ದು, ಅಪಘಾತದ ಪರಿಣಾಮವಾಗಿ ಅವರ ಕಾಲಿಗೆ ಫ್ರಾಕ್ಚರ್ ಆಗಿದೆ .
ಸ್ಥಳೀಯರು ಕೂಡಲೇ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಚಿಕಿತ್ಸೆ ಮುಂದುವರಿದಿದೆ.
ಅಪಘಾತಕ್ಕೆ ಕಾರಣವಾದ ಕಾರು ತಪ್ಪು ಮಾರ್ಗದಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನೆಯ ಕುರಿತು ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.