ಬೆಂಗಳೂರು, ನವೆಂಬರ್ 3: ಖ್ಯಾತ ಕನ್ನಡ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಚಿತ್ರರಂಗದಲ್ಲಿ ಆಘಾತವನ್ನುಂಟುದೆ. ತಮ್ಮ ವಿಭಿನ್ನ ಶೈಲಿ ಚಿತ್ರಕಥೆಗಳಿಂದ ಗ ಗುರುಪ್ರಸಾದ್ ಅವರು ಪ್ರಸಿದ್ಧರಾಗಿದ್ದರು.
ಗುರುಪ್ರಸಾದ್ ರವರು ಬೆಂಗಳೂರಿನಲ್ಲಿ ಅವರ ನಿವಾಸದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದು ಎಂದು ವರದಿಯಾಗಿದೆ. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ. ಅವರ ಈ ನಿರ್ಧಾರದ ಕಾರಣ ಸ್ಪಷ್ಟವಾಗಿಲ್ಲ, ಆದರೆ ವೈಯಕ್ತಿಕ ಅಥವಾ ವೃತ್ತಿಪರ ಒತ್ತಡ ಇದಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.
ಗುರುಪ್ರಸಾದ್ ರವರ ಸಾವಿನ ಸುದ್ದಿಯಿಂದ ಕನ್ನಡ ಚಿತ್ರರಂಗವು ಮಹತ್ವದ ಶಕ್ತಿಯನ್ನು ಕಳೆದುಕೊಂಡಿದೆ ಎಂದೂ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ಅಪಾರ ನಷ್ಟ ಎಂದು ಅಭಿಮಾನಿಗಳು ಮತ್ತು ಸಹೋದ್ಯೋಗಿಗಳು ಹೇಳಿದ್ದಾರೆ.